ಹುಬ್ಬಳ್ಳಿ: ಶಾಲೆಯಲ್ಲಿನ ಶಿಕ್ಷಕಿಯ ಅಕ್ರಮ ಸಂಬಂಧಕ್ಕೆ ಕೋಪ ಮಾಡಿಕೊಂಡ ಸಹ ಶಿಕ್ಷಕನೊಬ್ಬ, ಶಿಕ್ಷಕಿ ಹಾಗೂ ಆಕೆಯ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಶಿಕ್ಷಕಿ ಮಗ ಸಾವನಪ್ಪಿ ಶಿಕ್ಷಕಿ ಸಾವು ಬದುಕಿನ ನಡುವೆ ಹೋರಾಟವನ್ನು ನಡೆಸುತ್ತಿದ್ದಾಳೆ.
ಕಳೆದ ಮೂರು ದಿನಗಳ ಹಿಂದೆ ನರಗುಂದ ತಾಲ್ಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿತ್ತು,ಅದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲ್ಸ ಮಾಡುತ್ತಿದ್ದ ಶಿಕ್ಷಕ,ಶಿಕ್ಷಕಿಯ ಅಕ್ರಮ ಸಂಬಂದಕ್ಕೆ ಬೇಸತ್ತು ಸಲಾಕೆಯಿಂದ ಹೊಡೆದು ಪರಾರಿಯಾಗಿದ್ದ.ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಗದಗ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿಯನ್ನು ಪಡೆದಿದ್ದರು,ಅಷ್ಟೇ ಅಲ್ಲದೆ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧನ ಮಾಡಿ ವಿಚಾರಣೆ ಮಾಡಿದಾಗ.
ಆರೋಪಿ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿದ ಕಾರಣ ಈ ರೀತಿಯಾಗಿ ಮಾಡಿದ್ದೇನೆ ಅಂತಾ ಪೊಲೀಸ್ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಅಂತಾ ಬಲ್ಲ ಮೂಲಗಳಿಂದ ತಿಳಿದು ಬಂದಿದ್ದು,ಸಧ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.