ಅಪರಾಧಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಕಾರಿಗೆ “PRESS”ಅಂತಾ ಬರೆಯಿಸಿ “ಗೋವಾ ಮಧ್ಯ” ಸಾಗಾಟ ಮಾಡುತ್ತಿದ್ದ “ಐನಾತಿ ಸ್ವಾಮೀ” ಅಂದರ್…!

Spread the love

ಹುಬ್ಬಳ್ಳಿ: ಕಾರಿಗೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ ಆಸಾಮಿಯನ್ನು ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸುವ ಕಾರ್ಯವನ್ನು ಮಾಡಿದ್ದಾರೆ.

ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರಿಗೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮಧ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ.

ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಸಿಸಿಬಿ ಇನ್ಸ್ಪೆಕ್ಟರ್ ಗುಳಾರಿ ನೇತೃತ್ವದ ತಂಡ ಶ್ರೀಕಾಂತಯ್ಯ ದೇಶಪಾಂಡೆ ನಗರದ ಗುಜರಾತ್ ಭವನದ ಬಳಿ ಕಾರಿನಲ್ಲಿ ಅಕ್ರಮವಾಗಿ ಮಧ್ಯ ಸಾಗಾಟ ಮಾಡುತ್ತಿದ್ದಾಗ ದಾಳಿಯನ್ನು ಮಾಡಿದಾಗ ಕಾರಿನಲ್ಲಿ ಗೋವಾ ರಾಜ್ಯದ 35 ಲೀಟರ್ ಅಕ್ರಮ ಮಧ್ಯ ಹಾಗೂ ಸಾಗಾಟ ಮಾಡಲು ಬಳಸುತ್ತಿದ್ದ ಕಾರನ್ನು ಸೀಜ್ ಮಾಡಿದ್ದಾರೆ.

ಸದ್ಯ ಆರೋಪಿಯಿಂದ 30 ಸಾವಿರ ಮೌಲ್ಯದ ಮಧ್ಯ ಹಾಗೂ ಕಾರನ್ನು ಸೇರಿ 655760 ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ವಶಕ್ಕೇ ಪಡೆದು ಆರೋಪಿಯ ಮೇಲೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಅಟ್ಟಿದ್ದಾರೆ. ಸಿಸಿಬಿ ಪೊಲೀಸರ ಕಾರ್ಯಕ್ಕೆ ಇದೀಗ ಹಿರಿಯ ಅಧಿಕಾರಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page