ಮೈಸೂರು : ಖಾಸಗಿ ಶಾಲೆಗೆ ಸೇರಿದ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಡಿಟಿಎಂಎನ ಶಾಲೆಯ ಹಿಂಭಾಗದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ಸು ಸಂಪೂರ್ಣವಾಗಿ ಸುಟ್ಟಿದ್ದು,
ಬಸ್ಸಿನ ಅಕ್ಕಪಕ್ಕದಲ್ಲಿ ನಿಂತಿದ್ದ ಇನ್ನೊಂದಿಷ್ಟು ಬಸ್ ಗಳನ್ನು ಸಾರ್ವಜನಿಕರು ಬೇರೆಡೆ ತಳ್ಳಿ ಬೆಂಕಿ ಬೇರೆ ಬಸ್ ಗಳಿಗೆ ಹತ್ತದಂತೆ ನೋಡಿಕೊಂಡಿದ್ದಾರೆ,ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು ಆದ್ರೂ ಕೂಡಾ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬರುವುದರೊಳಗೆ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿದ್ದು ಯಾವುದೇ ರೀತಿಯಾದ ಪ್ರಾಣ ಹಾನಿ ಸಂಭವಿಸಿಲ್ಲ ಅಂತಾ ಹೇಳಿದ್ದು.ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.