ಹುಬ್ಬಳ್ಳಿ:ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸಾಯಂಕಾಲ ನವನಗರ ಬಳಿ ನಡೆದಿದೆ.
ನವನಗರದ ಕ್ಯಾನ್ಸರ್ ಆಸ್ಪತ್ರೆಯ ಬಳಿಯಲ್ಲಿ ಬೈಕ್ ಹೋಗುತ್ತಿದ್ದಾಗ ಏಕಾಏಕಿ ಟ್ರ್ಯಾಕ್ಟರ್ ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ಬರದೆ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪರಶುರಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು. ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.