ಕಿಮ್ಸನಲ್ಲಿ ಕೋವಿಡ್ ರೋಗಿ ಸಾವು ಪ್ರಕರಣ-ತನಿಖೆಗೆ ಡಿಸಿ ಆದೇಶ
ಹುಬ್ಬಳ್ಳಿ : ಕಿಮ್ಸ್ ವೇದಾಂತ ಕೋವಿಡ್ ಕೇರ್ ಸೆಂಟರ್ನಲ್ಲಿ ನಿನ್ನೆಯ ದಿನ (ಜ.17) ನರ್ಸಿಂಗ್ ಸಿಬ್ಬಂದಿಗಳ ನಿರ್ಲಕ್ಷದಿಂದ ಕೋವಿಡ್ ಸೋಂಕಿತ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಈ ಕುರಿತು ಸೂಕ್ತ ತನಿಖೆ ಮಾಡಿ 24 ಗಂಟೆಯೊಳಗೆ ವರದಿ ಸಲ್ಲಿಸಲು ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಲಿಖಿತ ಸೂಚನೆ ನೀಡಿದ್ದಾರೆ ಎಂದು ಡಿ ಹೆಚ್ ಓ ಬಸನಗೌಡ ಕರಿಗೌಡರ ಹೇಳಿದರು.
ನಗರದಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗೃತೆ ವಹಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಿರುವ ಬೆಡ್, ವೈದ್ಯಕೀಯ ಸೌಲಭ್ಯ, ಆಕ್ಸಿಜನ್, ಔಷಧಿಗಳ ಸಂಗ್ರಹ ಹಾಗೂ ವಿತರಣೆಗೆ ಕ್ರಮ ವಹಿಸಲಾಗಿದೆ. ಸೋಂಕಿತರಿಗೆ ಅಗತ್ಯವಿರುವ ಆರೋಗ್ಯ ಸೇವೆಗಳನ್ನು ಪೂರೈಸಲು ಯೋಜಿತ ರೀತಿಯಲ್ಲಿ ಕಾರ್ಯಗಳನ್ನು ಸಿದ್ಧಗೊಳಿಸಲಾಗಿದೆ.
ಆದ್ರೆ ನಿನ್ನೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ವೈಧ್ಯರ ನಿರ್ಲಕ್ಷ್ಯಕ್ಕೆ ಮಂಗಳಾ ಎಂಬ ಮಹಿಳೆ ಮೃತಪಟ್ಟಿದ್ದಾರೆ ಎನ್ನೋ ಆರೋಪ ಇದೆ.
ಈ ಬಗ್ಗೆ ಜಿಲ್ಲಾಧಿಕಾರಿಯರು ನಮಗೆ ವರದಿ ನೀಡಲು ಹೇಳಿದ್ದಾರೆ ಈ ಬಗ್ಗೆ ನಾವು ಟಿಹೆಚ್ಓ ನೈತೃತ್ವದಲ್ಲಿ ಮೂರು ಜನ ಟೀಂ ಮಾಡಿದ್ದೇವೆ. 24 ಗಂಟೆಯೊಳಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುತ್ತೇವೆ
ಕುಲಕುಂಶ ತನೀಖೆ ನಡೆಸಿ ಯಾರು ತಪ್ಪು ಮಾಡಿದ್ದಾರೆ. ಅವರ ವಿರುದ್ದ ಕ್ರಮಕ್ಕೆ ಶಿಫಾರಸ್ಸು ಮಾಡುತ್ತೇವೆ ಎಂದರು.