ಧಾರವಾಡ ದಲ್ಲಿ “ರಕ್ತ” ಹರಿಸಿದ “ತಲ್ವಾರ್” ಓರ್ವನ ಸ್ಥಿತಿ ಗಂಭೀರ.
ಧಾರವಾಡ:ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಆಸ್ಪತ್ರೆಗೆ ದಾಖಲಾದ ಘಟನೆ ವಿದ್ಯಾ ಕಾಶಿ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಕೋಳಿಕೇರಿಯ ನಿವಾಸಿ ಶ್ರೀನಿವಾಸ ಎಂಬಾತನ ಮೇಲೆ ಪ್ರಕಾಶ ಹಾಗೂ ಅಭಿಷೇಕ ಎಂಬುವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಇಂದು ಏಕಾಏಕಿ ಮನೆಯ ಮುಂದೆ ಮೊಬೈಲ್ ನೋಡಿಕೊಂಡು ನಿಂತಿದ್ದ ಶ್ರೀನಿವಾಸನ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕು ಹಾಗೂ ತಲ್ವಾರನಿಂದ ಭೀಕರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಕೂಡಲೇ ಗಂಭೀರವಾಗಿ ಗಾಯಗೊಂಡ ಶ್ರೀನಿವಾಸ ನನ್ನು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.ಇಂದು ರಾತ್ರಿ ನಡೆದ ಈ ಘಟನೆಯಿಂದ ಇದೀಗ ಇಡಿ ಕೋಳಿಕೇರಿ ಜನರು ಭಯಬೀತಾರಾಗಿದ್ದರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಧಾರವಾಡ ಶಹರ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಎಸಿಪಿ ಭೇಟಿ ನೀಡಿ ಶ್ರೀನಿವಾಸ ಕುಟುಂಬಸ್ಥರಿಂದ ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.ಸದ್ಯ ಘಟನೆಯ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಹಲ್ಲೆ ಮಾಡಿ ಪರಾರಿಯಾದವರ ಪತ್ತೆಗೆ ಜಾಲವನ್ನು ಬೀಸಿದ್ದಾರೆ.