ಅಪರಾಧನಮ್ಮೂರುಹುಬ್ಬಳ್ಳಿ- ಧಾರವಾಡ
ಕ್ಷುಲ್ಲಕ ವಿಚಾರಕ್ಕೇ ಯುವಕನ ತಲೆಗೆ ಚಾಕು ಇರಿತ…!
ಧಾರವಾಡ: ಕ್ಷುಲ್ಲಕ ವಿಚಾರಕ್ಕೇ ಯುವಕನಿಗೆ ಚಾಕು ಇರಿದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಕೆಲಗೇರಿಯ ಆಂಜನೇಯ ನಗರದಲ್ಲಿ ನಡೆದಿದೆ.
ಕ್ಷುಲ್ಲಕ ವಿಚಾರಕ್ಕೇ ಯುವಕರ ನಡುವೆ ಗಲಾಟೆ ಆರಂಭವಾಗಿ ಪ್ರಜ್ವಲ ಎಂಬ ಯುವಕನ ತಲೆಗೆ ಚಾಕು ಇರಿದ ಪರಿಣಾಮ ಯುವಕನ ತಲೆಯಲ್ಲಿಯೇ ಚಾಕು ಸಿಲುಕಿದೆ. ಕೂಡಲೇ ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು.
ಧಾರವಾಡ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.