ನಮ್ಮೂರುರಾಜಕೀಯಹುಬ್ಬಳ್ಳಿ- ಧಾರವಾಡ

“ಚೇತನ್ ಹಿರೇಕೆರೂರು”ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂಬ ವಿಷಯಕ್ಕೆ ಚೇತನ್ ಹೇಳಿದ್ದೇನು ಗೊತ್ತಾ..!

Spread the love

ಹುಬ್ಬಳ್ಳಿ: ನಾನು ಕಾಂಗ್ರೆಸ್ ಕಚೇರಿಗೆ ಹೋಗಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ. ಈ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಮ್ಮ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ಸನ್ಮಾನಿಸಿದ್ದು ನಿಜ.‌ ಈ ವೇಳೆ ನನ್ನನ್ನು ಆತ್ಮೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಡಿ.ಕೆ.ಶಿವಕುಮಾರ್ ಅವರು ಆಹ್ವಾನಿಸಿದರು. ಈ ವಿಷಯ ನನಗೂ ಸಂತೋಷ ತಂದಿತ್ತು. ಆದರೆ ಪಕ್ಷ ಸೇರ್ಪಡೆ ಕುರಿತು ವಾರ್ಡ್ ಮತದಾರರು ಹಾಗೂ ಗುರು-ಹಿರಿಯರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಡಿ.ಕೆ ಶಿವಕುಮಾರ್ ಅವರಿಗೆ ತಿಳಿಸಿದ್ದೆ ಎಂದಿದ್ದಾರೆ.

ಇನ್ನೂ ಇದನ್ನೇ ಕೆಲವು ನಾನು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಬಿಂಬಿಸುತ್ತಿದ್ದಾರೆ. ಆದ್ದರಿಂದ ನಾನು ಕಾಂಗ್ರೆಸ್ ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ. ಮುಂದೆ ವಾರ್ಡನ ಎಲ್ಲ ಗುರು-ಹಿರಿಯರೊಂದಿಗೆ ಚರ್ಚಿಸಲು ಸಭೆ ಕರೆಯಲು ತಿರ್ಮಾನಿಸಿದ್ದು, ಕಾಂಗ್ರೆಸ್ ಸೇರ್ಪಡೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸ್ಪಷ್ಟ ಹೇಳಿಕೆ ನೀಡುವುದಾಗಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page