ಅಂತಾರಾಷ್ಟ್ರೀಯ

ತಮಿಳುನಾಡಿನಲ್ಲಿ ಸೇನಾ ಮುಖ್ಯಸ್ಥರ “ಹೆಲಿಕಾಪ್ಟರ್” ದುರಂತ,ಸಾವಿನ ಸಂಖ್ಯೆ 11 ಕ್ಕೇ ಏರಿಕೆ..!

Spread the love

ವಿಡಿಯೋ ನೋಡಲು ಲಿಂಕ್ ಒತ್ತಿ.

ಚೆನ್ನೈ: ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ.

ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಕುಟುಂಬದವರು ಸೇರಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಈಗಾಗಲೇ ಮೂವರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ನಲ್ಲಿ ರಕ್ಷಣಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಇದ್ದರು ಎಂಬ ಮಾಹಿತಿ ಇದೆ. ಆದರೆ ಈ ಬಗ್ಗೆ ಸೇನಾ ಮೂಲಗಳಿಂದಾಗಲಿ ಅಥವಾ ಕೇಂದ್ರ ಸರ್ಕಾರದಿಂದಾಗಲಿ ಅಧಿಕೃತವಾಗಿ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಈಗಾಗಲೇ 11 ಅಂತಾ ಹೇಳಲಾಗುತ್ತಿದ್ದು,ಮೃತಪಟ್ಟವರ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

Back to top button
Breaking News
HomeHomeHomeHomeSample Page

You cannot copy content of this page