ಹುಬ್ಬಳ್ಳಿ:ಮನೆಯಲ್ಲಿನ ಆಂತರಿಕ ಕಲಹದ ಅತಿರೇಕಕ್ಕೆ ಹೋದ ಪರಿಣಾಮ ತನ್ನ ಹೆಂಡತಿ ಹಾಗೂ ಮಕ್ಕಳ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ನಾಲ್ವರ ಪೈಕಿ ಒಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಹುಬ್ಬಳ್ಳಿ ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಇಂದು ಬೆಳ್ಳಿಗ್ಗೆ 5 ಗಂಟೆಯ ಸುಮಾರಿಗೆ ಪಕ್ಕೀರಪ್ಪ ಮಾದರ ಎಂಬಾತ ತನ್ನ ಹೆಂಡತಿ ಹಾಗೂ ಮೂವರ ಮಕ್ಕಳ ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದ.ಹಲ್ಲೆಗೊಳಗಾಗಿ ಗಂಭೀರವಾಗಿದ್ದ ಪತ್ನಿ ಹಾಗೂ ಮೂವರು ಮಕ್ಕಳನ್ನು ಸ್ಥಳೀಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.
ಆದ್ರೆ ಗಂಭೀರವಾಗಿ ಗಾಯಗೊಂಡಿದ್ದ ಒಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಆರು ವರ್ಷದ ಮಗ ಶ್ರೇಯಸ್ ಮೃತಪಟ್ಟಿದ್ದು ಪತ್ನಿ ಹಾಗೂ ಇನ್ನುಳಿದ ಎರಡು ಮಕ್ಕಳು ಇದೀಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಸದ್ಯ ಘಟನೆಯ ಕುರಿತು ಹುಬ್ಬಳ್ಳಿಯ ಗ್ರಾಮೀಣ ಠಾಣೆಯ ಪೊಲೀಸರು ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡು ಘಟನೆಗೆ ಕಾರಣವೇನು ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.