ಮೈಸೂರು : ಮದುವೆ ಆಗಿದ್ದರು ಕೂಡಾ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಮಹಿಳೆ ಹಾಗೂ ಪುರುಷನೊಬ್ಬನನ್ನು ಎರಡು ದಿನಗಳ ಕಾಲ ಕಂಬಕ್ಕೆ ಕಟ್ಟಿ ಹಾಕಿದ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಗಾಯತ್ರಿ ಹಾಗೂ ಪಕ್ಕದ ಗ್ರಾಮದ ವಿಷ್ಣು ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿ ಚಿತ್ರ ಹಿಂಸೆ ನೀಡಿದ್ದಾರೆ.
ಮದುವೆ ಆಗಿ ಮೂರು ಮಕ್ಕಳು ಇದ್ದರು ಕೂಡಾ ಗಾಯಿತ್ರಿ ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ,ಇಬ್ಬರನ್ನು ಗಾಯಿತ್ರಿ ಮನೆಯವರು ಹಾಗೂ ಸ್ಥಳೀಯರು ಸೇರಿ ಇಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಎರಡು ದಿನಗಳ ಕಾಲ ಚಿತ್ರ ಹಿಂಸೆಯನ್ನು ನೀಡಿದ್ದಾರೆ.
ಸಧ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,ವಿಡಿಯೋ ನೋಡಿ ಸ್ಥಳೀಯ ಪೊಲೀಸರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ