ಅಪರಾಧನಮ್ಮೂರುಬ್ರೇಕಿಂಗ್ ನ್ಯೂಸ್ಹುಬ್ಬಳ್ಳಿ- ಧಾರವಾಡ
ಹುಬ್ಬಳ್ಳಿಯಲ್ಲಿ ‘ಮಟ ಮಟ’ ಮಧ್ಯಾಹ್ನ “ರಕ್ತ” ಹರಿಸಿದ ಮಚ್ಚು..!
ಹುಬ್ಬಳ್ಳಿ : ಕಳ್ಳತನ ಮಾಡಿರುವ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾನೆ ಎಂದು ಸಂಶಯ ಮಾಡಿ ಮಚ್ಚಿನಿಂದ ಯುವಕನ ಮೇಲೆ ಮಾರಣಾಂತಿಕ ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬಬ್ಲೂ ಎಂಬಾತ ಪ್ರಭುರಾಜ ಕಳ್ಳತನ ಮಾಡಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾನೆ ಎಂದು ಸಂಶಯ ವ್ಯಕ್ತ ಪಡಿಸಿ ಬಬ್ಲುನನ್ನು ಕುಸುಗಲ್ ರಸ್ತೆಯಲ್ಲಿನ ಶೆಲ್ ಪೆಟ್ರೋಲ್ ಪಂಪ್ ಬಳಿಯಲ್ಲಿ ಕರೆಯಿಸಿ.
ಆತನ ಮೇಲೆ ಎಳೆನೀರು ಕೊಚ್ಚುವ ಮಚ್ಚಿನಿಂದ ಪ್ರಭು ಹಾಗೂ ಪ್ರಶಾಂತ ಸೇರಿ ಬಬ್ಲು ಮೇಲೆ ಹಲ್ಲೆ ಮಾಡಿದ್ದಾರೆ, ಪರಿಣಾಮ ಬಬ್ಲೂ ಗಂಭೀರವಾಗಿ ಗಾಯಗೊಂಡಿದ್ದು.
ಕೂಡಲೇ ಆತನನ್ನು ಹುಬ್ಬಳ್ಳಿಯ್ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು,ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.