ನವನಗರ ‘ಪಬ್ಲಿಕ್ ಸ್ಕೂಲ್’ ನಲ್ಲಿ ಕಾರ್ಯಾಗಾರ ‘ಲಕ್ಷ್ಮೀ ಹಿರೇಮಠ’ ಅವರಿಂದ ವಿದ್ಯಾರ್ಥಿಗಳಿಗೆ ಗಣಿತದ ಪಾಠ
ಹುಬ್ಬಳ್ಳಿ: ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹುಬ್ಬಳ್ಳಿ ಗ್ರಾಮೀಣ ವಲಯ ಹಾಗೂ ಲಕ್ಷ ಅಕಾಡೆಮಿ (ರಿ) ನವನಗರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ನವನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣಿತ ಕಾರ್ಯಗಾರ ನೆರವೇರಿತು.
ಕೊರೋನಾ, ಓಮೈಕ್ರಾನ್ ವೈರಸ್ ಹಿನ್ನೆಲೆಯಲ್ಲಿ ಶಾಲೆಗಳು ಬಂದ್ ಆಗಿ ಆನ್ಲೈನ್ ಕ್ಲಾಸ್ ಮೂಲಕ ಪಠ್ಯವಿಷಯವನ್ನು ಕಲಿಯಬೇಕಾಗಿತ್ತು. ಇದೀಗ ವೈರಸ್ ನಿಯಂತ್ರಣಕ್ಕೆ ಬಂದಿದ್ದು, ಮತ್ತೆ ಶಾಲೆಗಳು ಓಪನ್ ಆಗಿ ಕಲಿಕೆ ನಡೆಯುತ್ತಿದೆ. ಈ ವೇಳೆಯಲ್ಲಿ 10 ನೇ ತರಗತಿ ವಾರ್ಷಿಕ ಪರೀಕ್ಷೆಗೆ ದಿನ ಗಣನೆ ಆರಂಭವಾಗಿದ್ದು, ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಶಿಕ್ಷಣ ಇಲಾಖೆ ಸಂಪನ್ಮೂಲ ವ್ಯಕ್ತಿಗಳಿಂದ ಆಯಾ ವಿಷಯಗಳಲ್ಲಿ ಪಾಂಡಿತ್ಯ ಹೊಂದಿರುವ ವ್ಯಕ್ತಿಗಳಿಂದ ಕಾರ್ಯಾಗಾರ ನಡೆಸುತ್ತಿದೆ.
ಅದರಂತೆ ಇಂದು ನವನಗರದ ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಲಕ್ಷ ಅಕಾಡೆಮಿಯ ಮುಖ್ಯಸ್ಥೆ ಲಕ್ಷ್ಮಿ ಹಿರೇಮಠ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.