ನಮ್ಮೂರುಬ್ರೇಕಿಂಗ್ ನ್ಯೂಸ್ರಾಜಕೀಯಹಾವೇರಿ
“ಅಣ್ಣ” ಬಸವರಾಜ ಬೊಮ್ಮಾಯಿ ‘ಸೆಂಟ್ರಲ್ ಮಿನಿಸ್ಟರ್’ ಆಗ್ತಾರೇ ಎಂದ “ತಮ್ಮ” ಮುರುಗೇಶ ನಿರಾಣಿ..!
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವರಾಗಲಿದ್ದಾರೆ ಎಂದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆಯ ಚರ್ಚೆಯ ನಡುವೆಯೇ ಈ ಹೇಳಿಕೆ ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ.
ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೆಲವರು ಏನೇನೋ ಹೇಳಿಕೆಗಳನ್ನು ನೀಡುತ್ತಾರೆ. ಆದರೆ ಯಾವುದೇ ಗೊಂದಲಗಳು ಬೇಡ. ಈ ಅವಧಿ ಪೂರ್ತಿ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಂದೆ ಬೊಮ್ಮಾಯಿ ಅಣ್ಣ ಕೇಂದ್ರ ಮಂತ್ರಿಯಾಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ತಂದೆ ಎಸ್.ಆರ್. ಬೊಮ್ಮಾಯಿ ಅವರಂತೆ ಸಿಎಂ ಬೊಮ್ಮಾಯಿ ಅವರು ಕೂಡ ಕೇಂದ್ರದಲ್ಲಿಯೂ ಮಂತ್ರಿಯಾಗುತ್ತಾರೆ ಆ ವಿಶ್ವಾಸ ನಮಗಿದೆ ಎಂದು ಹೇಳಿದರು