ನಮ್ಮೂರುಹುಬ್ಬಳ್ಳಿ- ಧಾರವಾಡ
ರಸ್ತೆ ಅಪಘಾತ ಕೀಮ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ ಸಾವು..!
ಹುಬ್ಬಳ್ಳಿ : ನಿನ್ನೇ ಕರ್ತವ್ಯಕ್ಕೆ ಬರೋ ಸಂದರ್ಭದಲ್ಲಿ ಬರೋವಾಗ ಬೈಕ್ ಮೇಲಿಂದ ನಿಯಂತ್ರಣ ತಪ್ಪಿ ಬಿದ್ದಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನಪ್ಪಿದ ಘಟನೆ ನಡೆದಿದೆ.
ಕೀಮ್ಸ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ ಎಂಬಾತ ನಿನ್ನೇ ಗೋಕುಲ ರಸ್ತೆಯಲ್ಲಿ ಬೈಕ್ ಮೇಲಿಂದ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ತಲೆಗೆ ಬಲವಾದ ಏಟು ಬಿದ್ದಿತ್ತು.
ಕೂಡಲೇ ಈತನನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದು, ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.