ನಮ್ಮೂರುಬೆಳಗಾವಿರಾಜಕೀಯ

ಕರಸಿರಿ “ಸೂಳೇ ಮಗನ್ನಾ”ಪೊಲೀಸರ ಮುಂದೆ ಅನ್ನದಾತನ ಆಕ್ರೋಶ..!

Spread the love


ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದುಪುಡಿಯ ಶಿವಸಾಗರ ಶುಗರ್ಸ್‌ ಆ್ಯಂಡ್ ಅಗ್ರೋ ಪ್ರೊಡಕ್ಟ್ ಕಂಪನಿಯ ಅಕ್ರಮ ವ್ಯವಹಾರಗಳ ಹಿನ್ನೆಲೆಯಲ್ಲಿ, ಕಾರ್ಖಾನೆಯ ಅಧ್ಯಕ್ಷ ರಾಜೇಂದ್ರ ಪಾಟೀಲ ಸೇರಿದಂತೆ ನಿರ್ದೇಶಕರು ಬೇಕಾಬಿಟ್ಟಿಯಾಗಿ, ನಕಲಿ ದಾಖಲೆ ಸೃಷ್ಟಿ ಮಾಡಿ, ಭಾರಿ ಅವವ್ಯಹಾರ ಮಾಡದ್ದಾರೆಂದು ಈಗ ಕಂಪನಿಯ ಮಾಜಿ ನಿರ್ದೇಶಕರು, ಸದಸ್ಯರು ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಶಿವಸಾಗರ ಸಕ್ಕರೆಯಲ್ಲಿ ಸಾಕಷ್ಟು ಅವ್ಯವಹಾರ ಆಗಿದ್ದರ ಬಗ್ಗೆ ಸರ್ಕಾರಕ್ಕೆ ಸಾಕ್ಷಿ ಸಮೇತ ವರದಿಯನ್ನು ನೀಡಿದರು ಕೂಡಾ,ಸರ್ಕಾರ ಇತ್ತ ಗಮನ ಕೂಡಾ ಹರಿಸಿಲ್ಲ ಇದರ ನಡುವೆ ಪ್ಯಾಕ್ಟರಿ ಇಂದ ಮೋಸ್ ಹೋದ,ಶೇರುದಾರರು ಅನಿರ್ದಿಷ್ಟ ಮಸ್ಕರ್ ನಡೆಸುತ್ತಿದ್ದರು ಕೂಡಾ ಯಾವೊಬ್ಬ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಕೂಡಾ ಹರಿಸಿಲ್ಲ,ಖಾಕಿ ಬಿಟ್ಟು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ ಅಂತಾ ಪ್ಯಾಕ್ಟರಿ ಮುಂಬಾಗದಲ್ಲಿ ಕೂತ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು.

ರಾಜೇಂದ್ರ ಪಾಟೀಲ ಸೇರಿದಂತೆ ಏಳು ಜನರು ಶಿವಸಾಗರ ಶುಗರ್ಸ್‌ ಆ್ಯಂಡ್‌ ಅಗ್ರೋ ಪ್ರೊಡಕ್ಟ್ ಕಂಪನಿಗೆ 40 ಸಾವಿರದಷ್ಟು ಷೇರುದಾರರಿದ್ದು, ಇವರೆಲ್ಲರನ್ನು ನಿರ್ಲಕ್ಷಿಸಿ ಸರ್ವ ಸಾಧರಣ ಸಭೆ ಕರೆಯದೆ ಸರ್ವಾಧಿಕಾರದಿಂದ ವರ್ತಿಸಿದ್ದಾರಂತೆ, ಅಲ್ಲದೆ 2014ರ ಫೆ. 14 ರಂದು ನಕಲಿ ದಾಖಲೆ ಸೃಷ್ಟಿ ಮಾಡಿ 10 ಜನ ನಿರ್ದೇಶಕರನ್ನು ಏಕಾಏಕಿ ತೆಗೆದುಹಾಕಿದ್ದರು.

ಕಾರ್ಖಾನೆಯ ಆರಂಭಕ್ಕೆ ವಿವಿಧ ಬ್ಯಾಂಕುಗಳಿಂದ ಸಾಲ ಪಡೆಯಲಾಗಿದ್ದು, ಸಾಲದ ಕಂತು ಪಾವತಿಸಿಲ್ಲ. ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ ಬಿಲ್‌ ಹಾಗೂ ಟ್ರ್ಯಾಕ್ಟ್ರ್‌ಗಳಿಗೆ ಹಣ ನೀಡದೆ ವಂಚನೆ ಮಾಡಿದ್ದಾರೆ. ಆದ್ದರಿಂದ ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು, ಸಮಗ್ರ ತನಿಖೆ ಮಾಡಿ ತಪ್ಪಿಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page