ಬೀದರ್
ಪ್ರತಿಭಟನಾಕಾರರ ಆಕ್ರೋಶ “ತಹಶೀಲ್ದಾರ್” ಕಚೇರಿಯಲ್ಲಿನ ಸಾಮಗ್ರಿಗಳು ಪೀಸ್ ಪೀಸ್..
ಬೀದರ್:ಗಣರಾಜ್ಯೋತ್ಸವ ದಿನದಂದು ರಾಯಚೂರು ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ವಿಷಯಕ್ಕೆ ಸಂಬಂದಿಸಿದಂತೆ ಮನವಿ ಕೊಡಲು ಹೋದರು ಕೂಡಾ ತಹಶೀಲ್ದಾರ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ.
ಬೀದರ ಜಿಲ್ಲೆಯ ಹುಮನಾಬಾದ್ ತಹಶೀಲ್ದಾರ ಕಚೇರಿಯಲ್ಲಿ ದಲಿತ ಪರ ಸಂಘಟನೆಗಳು ಪೀಠೋಪಕರಣಗಳನ್ನು ದ್ವಂಸ ಮಾಡಿ ಆಕ್ರೋಶವನ್ನು ಹೊರಹಾಕಿದ್ದಾರೆ.
ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಮನವಿ ಪತ್ರ ಪಡೆಯಲು ತಹಸೀಲ್ದಾರ್ ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.
ಆದ್ರೆ ತಹಶೀಲ್ದಾರ, ಅಂಬೇಡ್ಕರ್ ಸರ್ಕಲ್ ಬಳಿ ಬಾರದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಹಶೀಲ್ದಾರ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ದ್ವಂಸ ಮಾಡಿದ್ದು,ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.